ಮಂಡಿಯೂರಿ ಕದನ ವಿರಾಮಕ್ಕೆ ಬಂದ ಪಾಕಿಸ್ತಾನಿಯರಿಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ. ಜಂಟಿ ಕೆಳಗೆ ಬಿದ್ದರೂ, ಮೀಸೆ ಮಣ್ಣಾಗಲಿಲ್ಲ ಅನ್ನೋ ಹಾಗೆ ಇವರ ಭಂಡತನಕ್ಕೆನೂ ಕಮ್ಮಿ ಇಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಈ ವರ್ತನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪತರಗುಟ್ಟಿದ ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸುತ್ತಾರೆ ಅಂದ್ರೆ ಭಾರತೀಯರು ಅದ್ಯಾವ ದಿಕ್ಕಿಗೆ ತಿರುಗಿ ನಗಬೇಕೋ ನೀವೇ ಹೇಳಿ. ಶಾಹಿದ್ ಅಫ್ರಿದಿ ಅವರು ಇಂತಹ ಪುಂಡಾಟಕ್ಕೆ ಮುಂದಾಗಿದ್ದು, ಯುದ್ಧ ಗೆದ್ದಿದ್ದೇವೆ ಎಂದು ವಿಜಯೋತ್ಸವದ ಮೆರವಣಿಗೆ ಮಾಡಿದ್ದಾರೆ.ಕರಾಚಿಯಲ್ಲಿ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರು ಱಲಿ ಮಾಡಿದ್ದಾರೆ. ಅಫ್ರಿದಿ ಜೊತೆಗಿದ್ದವರು ಈ ವಿಡಿಯೋ ರೆಕಾರ್ಡ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.ಇತ್ತೀಚೆಗೆ ಮಾತನಾಡಿದ್ದ ಶಾಹಿದ್ ಅಫ್ರಿದಿ ಅವರು ನಾವೇ ಭಾರತದ ಮೇಲಿನ ಯುದ್ಧವನ್ನು ಗೆದ್ದಿದ್ದೇವೆ. ಪಾಕಿಸ್ತಾನ ಕದನ ವಿರಾಮಕ್ಕೆ ಮನವಿ ಮಾಡಿಕೊಳ್ಳಲಿಲ್ಲ ಎಂದಿದ್ದರು. ಅಲ್ಲದೇ ಪಹಲ್ಗಾಮ್ ದಾಳಿಗೆ ಭಾರತವೇ ಕಾರಣ ಎಂದು ಗೂಬೆ ಕೂರಿಸಿದ್ದಾರೆ.
ಭಾರತ ಮಾಡಿದ ತಪ್ಪುಗಳಿಂದಲೇ ಪಹಲ್ಗಾಮ್ನಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಭಾರತ ಪಾಕಿಸ್ತಾನದ ಮೇಲೆ ಆರೋಪ ಮಾಡುತ್ತದೆ. ಭಾರತವೇ ಭಾರತೀಯರನ್ನು ಕೊಲ್ಲುವಂತೆ ಮಾಡಿಕೊಂಡಿದೆ.
ಇಸ್ಲಾಂ ಧರ್ಮ ನಮಗೆ ಶಾಂತಿಯನ್ನು ಮಾತ್ರ ಬೋಧಿಸುತ್ತದೆ. ಪಾಕಿಸ್ತಾನ ಎಂದಿಗೂ ಇಂತಹ ಭಯೋತ್ಪಾದನಾ ದಾಳಿಗೆ ಬೆಂಬಲ ನೀಡುವುದಿಲ್ಲ. ಭಾರತೀಯರು ತಮ್ಮನ್ನು ತಾವೇ ದೂಷಿಸಿಕೊಳ್ಳಬೇಕು. ನಾವು ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಲು ಸದಾ ಪ್ರಯತ್ನ ಪಡುತ್ತೇವೆ ಎಂದು ಶಾಹಿದ್ ಅಫ್ರೀದಿ ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…