ಕಾಮಿಡಿ ಕಿಲಾಡಿ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ ಇಂದು ಕುಟುಂಬಸ್ಥರು, ಆಪ್ತರು, ಸಾವಿರಾರು ಜನ ಅಗಲಿದ ಕಲಾವಿದನಿಗೆ ಭಾವುಕ ವಿದಾಯ ಹೇಳಿದ್ದಾರೆ. ಹೂಡೆ ಬೀಚ್ ಪಕ್ಕದಲ್ಲಿ ರಾಕೇಶ್ ಪೂಜಾರಿ ಅಂತ್ಯಕ್ರಿಯೆ ನೆರವೇರಿದೆ.
ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ಹಲವಾರು ಕಿರುತರೆಯ ನಟ, ನಟಿಯರು ಉಡುಪಿಗೆ ಆಗಮಿಸಿದ್ದರು. ರಾಕೇಶ್ ಅಂತಿಮ ದರ್ಶನ ಪಡೆದ ನಟಿ ನಯನಾ ಅವರು ನಾವು ಒಬ್ಬ ಒಳ್ಳೆ ಗೆಳೆಯನನ್ನು ಕಳೆದುಕೊಂಡೆವು. ರಾಕೇಶ್ ಅಪ್ಪನ ಹಾಗೆ, ಮನಸ್ಸು ಮಗುವಿನ ಹಾಗೆ. ನಾವೆಲ್ಲ ನಟ, ನಟಿಯರು ರಾಕೇಶ್ ಕುಟುಂಬದ ಜೊತೆ ಇದ್ದೇವು ಎಂದು ಕಣ್ಣೀರು ಹಾಕಿದರು.
ರಾಕೇಶ್ ಪೂಜಾರಿ ಒಬ್ಬ ಅಜಾತಶತ್ರು. ನನಗೆ ದೇವರ ಮೇಲೆ ಇದ್ದ ಸ್ವಲ್ಪ ನಂಬಿಕೆಯು ಹೊರಟು ಹೋಯಿತು. ಹೆಸರು, ದುಡ್ಡು ಅಂತ ಸಾಯ್ಬೇಡಿ ಅಂತ ಯಾವತ್ತು ಹೇಳುತ್ತಿದ್ದ. ಜೀವನದಲ್ಲಿ ಹೇಗಿದ್ದ ಹಾಗೆ ಸ್ಟೇಜ್ ಮೇಲೆ ಬರುತ್ತಿದ್ದ. ಅವನ ಜೊತೆ ಬಹಳ ದಿನ ಇರಲು ಪುಣ್ಯ ನಮಗೆ ಇಲ್ಲ.
ತಂಗಿಯ ಮದುವೆ ಮಾಡಬೇಕು ಎಂಬುದೇ ಆತನ ದೊಡ್ಡ ಕನಸಾಗಿತ್ತು. ಅವನ ಜೀವನದ ಒಂದೇ ಒಂದು ಆಸೆ ತಂಗಿಯ ಮದುವೆ ತುಂಬಾ ಗ್ರ್ಯಾಂಡ್ ಆಗಿ ಆಗಬೇಕು ಅನ್ನೋದಾಗಿತ್ತು. ಕಲಾವಿದರೆಲ್ಲರು ರಾಕೇಶ್ ಪೂಜಾರಿ ಕುಟುಂಬಕ್ಕೆ ಸಹಾಯ ಮಾಡಬೇಕು ಎಂದು ನಯನಾ ಕೇಳಿಕೊಂಡಿದ್ದಾರೆ.
ಇದೇ ವೇಳೆ ನಟ ಶಿವರಾಜ್ ಕೆ.ಆರ್ ಪೇಟೆ ಅವರ ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ನಾವು ನಮ್ಮ ಕುಟುಂಬದ ಕೂಸನ್ನು ಕಳೆದುಕೊಂಡಿದ್ದೇವೆ. ರಾಕೇಶ್ ಅಂದ್ರೆ ನಗು ನಗು ನಗು ನಗು ಬಿಟ್ಟು ಬೇರೆ ಏನಿಲ್ಲ. ಎಷ್ಟೇ ಸೀಸನ್ಗಳಾದರೂ ನಾವೆಲ್ಲರೂ ಕುಟುಂಬದಂತೆ ಕೆಲಸ ಮಾಡಿದ್ದೆವು. ರಾಕೇಶ್ ಪೂಜಾರಿ ತಂದೆಯನ್ನು ಕಳೆದುಕೊಂಡ ನಂತರ ಮನೆಗೆ ಆಧಾರ ಸ್ತಂಭವಾಗಿದ್ದ.
ಕಾಮಿಡಿ ಕಿಲಾಡಿ, ಚಾಂಪಿಯನ್ ಶಿಪ್ ಎಲ್ಲದರಲ್ಲೂ ನಾವು ಕುಟುಂಬ. ರಾಕೇಶ್ ತಂಗಿ ಮತ್ತು ತಾಯಿ ಜೊತೆ ನಾವು ಇದ್ದೇವೆ. ಸಂಪೂರ್ಣವಾಗಿ ಬೆಂಬಲ ನೀಡುತ್ತೇವೆ. ರಾಕೇಶ್ ಕುಟುಂಬಕ್ಕೆ ಎಲ್ಲರೂ ಸಹಾಯ ಮಾಡಬೇಕಾಗಿದೆ ಎಂದು ಶಿವರಾಜ್ ಕೆ.ಆರ್ ಪೇಟೆ ಹೇಳಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…