ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಎಂಬ ಅದ್ದೂರಿ ಕಾರ್ಯಕ್ರಮ ಇದೇ 23-07-2023ರ ರವಿವಾರ ನಡೆಯಲಿದೆ. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ ನಿವೇಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಣಿ ವಲಯ ಬಂಟರ ಸಂಘದ ಉಪಾಧ್ಯಕ್ಷರು, ಕವಯತ್ರಿ ಹಾಗೂ ಬರಹಗಾರ್ತಿ ವಿಂದ್ಯಾ ಎಸ್. ರೈಯವರು ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಲಿದ್ದಾರೆ.
ಮಾಜಿ ಸಚಿವ ಬಿ, ರಮಾನಾಥ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೀತಾರಾಮ್ ರೈ ಸವಣೂರು, ಬೆಳ್ತಂಗಡಿಯ ವಿಜಯ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ವಾಮದಪದವು ಟಿಎಸ್ಎನ್ ಇಂಡಸ್ಟ್ರೀಸ್ ಮಾಲಕ ಧೀರಜ್ ನಾಯ್ಕ್, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಾವಳಕಟ್ಟೆ ವಲಯ ಬಂಟರ ಸಂಘದ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ತಾಲೂಕು ಬಂಟರ ಸಂಘದ ಯುವ ಘಟಕದ ಅಧ್ಯಕ್ಷ ನಿಶಾನ್ ಆಳ್ವ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಲಯದ ಹಿರಿಯ ಬಂಟ ಬಂಧುಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಬಂಟರ ಸಂಘ ವಾಮದಪದವು ವಲಯ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ ಮತ್ತು ವಾಮದಪದವು ಬಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ ಇವರುಗಳ ಜಂಟಿ ಪ್ರಕಟನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…