ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತನ್ನದೆ ಮನೆಗೆ ಬೆಂಕಿ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ.
ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ ಬರುವಂತೆ ವಿನಂತಿಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ ಮೊನವೊಲಿಸಿ ಮಧ್ಯವರ್ಜನ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…