ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು, ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನಸೆಳೆಯಲಾಯಿತು.
ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು.
ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ನ ಡಾ. ರಾಜೇಶ್ ಬೆಜ್ಜಂಗಳ, ನಗರಸಭಾ ಸದಸ್ಯ ಯೂಸುಫ್, ಎಂಜಿನಿಯರ್ಗಳಾದ ದುರ್ಗಾ ಪ್ರಸಾದ್, ರಾಮಚಂದ್ರ, ಶ್ವೇತಾ ಕಿರಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…