ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಿ -ಗುಂಡೂರಾವ್

ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಇದಕ್ಕಾಗಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿ ಸಾಧಿಸಲು ಪ್ರಯತ್ನಿಸಬೇಕು. ಇದಕ್ಕಾಗಿ ಜೀವಸಾರ್ಥಕತೆ ಸೊಸೈಟಿಯ ನೋಂದಣಿ ಪ್ರಕ್ರಿಯೆ, ಕಾರ್ಯಾಚರಣೆಯಲ್ಲಿ ವೇಗ ತರಬೇಕು. ಜತೆಗೆ ಸ್ಟೀರಿಂಗ್ ಸಮಿತಿಯನ್ನು ರಚಿಸಿ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಣೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!