ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಇದಕ್ಕಾಗಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿ ಸಾಧಿಸಲು ಪ್ರಯತ್ನಿಸಬೇಕು. ಇದಕ್ಕಾಗಿ ಜೀವಸಾರ್ಥಕತೆ ಸೊಸೈಟಿಯ ನೋಂದಣಿ ಪ್ರಕ್ರಿಯೆ, ಕಾರ್ಯಾಚರಣೆಯಲ್ಲಿ ವೇಗ ತರಬೇಕು. ಜತೆಗೆ ಸ್ಟೀರಿಂಗ್ ಸಮಿತಿಯನ್ನು ರಚಿಸಿ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಣೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…