ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಇದಕ್ಕಾಗಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿ ಸಾಧಿಸಲು ಪ್ರಯತ್ನಿಸಬೇಕು. ಇದಕ್ಕಾಗಿ ಜೀವಸಾರ್ಥಕತೆ ಸೊಸೈಟಿಯ ನೋಂದಣಿ ಪ್ರಕ್ರಿಯೆ, ಕಾರ್ಯಾಚರಣೆಯಲ್ಲಿ ವೇಗ ತರಬೇಕು. ಜತೆಗೆ ಸ್ಟೀರಿಂಗ್ ಸಮಿತಿಯನ್ನು ರಚಿಸಿ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಣೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…