ರಾಜ್ಯ

ಹುಬ್ಬಳ್ಳಿ : ಮಕ್ಕಳಾಟ ಕೊಲೆಯಲ್ಲಿ ಅಂತ್ಯ

ಕೂಡಿ ಆಟವಾಡುತ್ತಿದ್ದ ಗೆಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. 9ನೇ ತರಗತಿ ಓದುತ್ತಿದ್ದ ಬಾಲಕನನನ್ನು 6ನೇ ಕ್ಲಾಸ್ ಬಾಲಕ ಕೊಂದಿದ್ದಾನೆ. ಹದಿಮೂರು ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ ಹದಿನೈದು ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಘಟನೆ ಹುಬ್ಬಳ್ಳಿ ನಗರದ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದ್ದು, ಗುರುಸಿದ್ದೇಶ್ವರ ನಗರದ ನಿವಾಸಿಯಾಗಿರೋ ಹದಿನೈದು ವರ್ಷದ ಚೇತನ್ ರಕ್ಕಸಗಿ ಕೊಲೆಯಾದ ಬಾಲಕ.

ಸೋಮವಾರ ಸಂಜೆ ಏಳು ಗಂಟೆ ಸಮಯದಲ್ಲಿ ಮನೆಯಿಂದ ಚಾಕುತಂದು, ಚೇತನ್ ನ ಹೊಟ್ಟೆಯ ಎಡಬಾಗದಲ್ಲಿ ಇರದಿದ್ದಾನೆ. ಚಾಕು ಇರಿಯುತ್ತಿದ್ದಂತೆ ಚೇತನ್ ಕುಸಿದು ಬಿದ್ದಿದ್ದಾನೆ. ಮಕ್ಕಳೆಲ್ಲರೂ ಚೀರುತ್ತಿದ್ದಂತೆ, ಕೊಲೆ ಮಾಡಿದ ಬಾಲಕನ ತಾಯಿ ಓಡಿ ಬಂದು, ಚೇತನ ನೆರವಿಗೆ ಬಂದಿದ್ದಾರೆ. ಕೂಡಲೇ ಚೇತನ್ ನನ್ನು, ಕೊಲೆ ಮಾಡಿದ ಬಾಲಕನ ತಾಯಿಯೇ ಕರೆದುಕೊಂಡು ಕಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಆಸ್ಪತ್ರೆ ಸೇರುವ ಮುನ್ನವೇ ಚೇತನ್ ಬಾರದ ಲೋಕಕ್ಕೆ ಹೋಗಿದ್ದಾನೆ.

ಇನ್ನು ಕೊಲೆಯಾದ ಚೇತನ್ ಈಗಷ್ಟೇ ಒಂಬತ್ತನೇ ತರಗತಿ ಪಾಸ್ ಆಗಿದ್ದ. ಕೊಲೆ ಮಾಡಿದ ಬಾಲಕ ಆರನೇ ತರಗತಿ ಉತ್ತೀರ್ಣನಾಗಿದ್ದು, ಇಬ್ಬರು ಎದುರು ಬಿದುರು ಮನೆಯ ಸ್ನೇಹಿತರು. ಸದ್ಯ ರಜೆ ಇದ್ದಿದ್ದರಿಂದ, ಎಲ್ಲಾ ಬಾಲಕರು ಸೇರಿದಕೊಂಡು ರಜಾ ದಿನಗಳನ್ನು ಮಜಾ ಮಾಡುತ್ತಿದ್ದರು.

ಅದರಂತೆ ಸೋಮವಾರ ಸಹ ಚೇತನ್ ಮತ್ತು ಕೊಲೆ ಮಾಡಿದ ಬಾಲಕ ಸೇರಿದಂತೆ ಐದಾರು ಸ್ನೇಹಿತರು ಸೇರಿಕೊಂಡು ಆಟವಾಡುತ್ತಿದ್ದರು. ಅಂಗಡಿ ರೀತಿಯ ಸೆಟ್ ಆಪ್ ಮಾಡಿಕೊಂಡು, ಅನೇಕ ವಸ್ತುಗಳನ್ನು ಮಾರಾಟ ಮಾಡುವ ಆಡವಾಡುತ್ತಿದ್ದರು. ಆಟವಾಡುತ್ತಿದ್ದಾಗಲೇ ಚೇತನ್ ಮತ್ತು ಕೊಲೆ ಮಾಡಿರೋ ಬಾಲಕನ ನಡುವೆ ಕಿರಿಕ್ ಆಗಿದೆ. ಅಷ್ಟಕ್ಕೆ ಬಾಲಕ ಮನೆಗೆ ಹೋಗಿ ಚಾಕುತಂದು ಚೇತನ್​ಗೆ ಇರಿದಿದ್ದಾನೆ.

ಇನ್ನು ಕೊಲೆ ಮಾಡಿದ ಬಾಲಕ ಮತ್ತು ಕೊಲೆಯಾದ ಬಾಲಕ ಇಬ್ಬರು ಪರಮಾಪ್ತ ಸ್ನೇಹಿತರು. ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಿದ್ದರು. ಪ್ರತಿನಿತ್ಯ ಇಬ್ಬರು ಮನೆ ಬಳಿಯೇ ಆಟವಾಡುತ್ತಿದ್ದರು. ಚೇತನ್, ಬಹಳ ಒಳ್ಳೆಯ ಹುಡುಗ ಇದ್ದ ಅಂತ ಸ್ವತ ಕೊಲೆ ಮಾಡಿದ ಬಾಲಕನ ತಾಯಿ ಕೂಡಾ ಕಣ್ಣೀರು ಹಾಕಿ, ಮಗ ಮಾಡಿದ ಕೃತ್ಯಕ್ಕೆ ಕಂಗಾಲಾಗಿದ್ದಾಳೆ. ಇನ್ನು ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕೇಳಿ ಸ್ವತ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಗೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಪರಿಶೀಲನೆ ನಡೆಸಿದ್ದು, ಕೊಲೆಯಾದ ಬಾಲಕನ ಕುಟುಂಬದವರನ್ನು ಸಮಾಧಾನ ಮಾಡಿದರು.

ಪುಟ್ಟ ಪುಟ್ಟ ಮಕ್ಕಳು ಗಲಾಟೆ ಮಾಡಿಕೊಂಡು ಕೊಲೆ ಮಾಡಿದ್ದು, ನಮ್ಮ ಸರ್ವಿಸ್ ನಲ್ಲಿಯೇ ಇದೇ ಮೊದಲು. ಪಾಲಕರು ಮಕ್ಕಳ ಬಗ್ಗೆ ಜಾಗೃತಿ ವಹಿಸಿಬೇಕು ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಚೇತನ್ ಕೊಲೆಗೆ ಸಂಬಂಧಿದಂತೆ ಕಮರಿಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊಲೆ ಮಾಡಿದ ಬಾಲಕನನ್ನು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

18 hours ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

18 hours ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

18 hours ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

18 hours ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago