ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೇ 20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಅವರು, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಈ ಮುಷ್ಕರದಲ್ಲಿ ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಗೊಂಡು, ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಕೊನೆಗೊಳ್ಳಲಿದೆ. ನಂತರ ಸಭೆ ನಡೆಯಲಿದೆ. ಹಾಗೆಯೇ ಕುಂದಾಪುರದಲ್ಲಿ ಶಾಸ್ತ್ರಿ ವೃತ್ತದಿಂದ ಆರಂಭಗೊಂಡು, ಬಸ್ ನಿಲ್ದಾಣವರೆಗೆ ಸಾಗಿ, ಶಾಸ್ತ್ರಿ ಸರ್ಕಲ್ ಗೆ ವಾಪಾಸಾಗಿ ಸಭೆ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಮೇ.17 ರಂದು ಉಡುಪಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಪಾದಯಾತ್ರೆಯ ಮೂಲಕ ಕರಪತ್ರವನ್ನು ಹಂಚಲಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಪ್ರ.ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಶೇಖರ್ ಬಂಗೇರಾ, ಕವಿರಾಜ್.ಎಸ್.ಕೋಟ್ಯಾನ್ ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…