ಜನ ಮನದ ನಾಡಿ ಮಿಡಿತ

Advertisement

ಕೊಯಮತ್ತೂರು: ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲಾ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯವು ಮಂಗಳವಾರ ರಂದು ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದೆ.

ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶೆ ಆರ್. ನಂದಿನಿ ದೇವಿ ಅವರು ಇಂದು ಈ ಮಹತ್ವದ ತೀರ್ಪು ನೀಡಿದ್ದಾರೆ.ಸಂತ್ರಸ್ತ ಮಹಿಳೆಯರಿಗೆ ಒಟ್ಟಾರೆ 85 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಅಪರಾಧಿಗಳಾದ ಕೆ. ತಿರುನಾವುಕ್ಕರಸು(34), ಎನ್. ರಿಶ್ವಂತ್, ಅಲಿಯಾಸ್ ಶಬರಿರಾಜನ್(32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹರೋನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39), ಮತ್ತು ಎಂ. ಅರುಣ್‌ಕುಮಾರ್ ಗೆ ಸಾಯುವವರೆಗೆ ಜೈಲು ಶಿಕ್ಷೆ ನೀಡಲಾಗಿದೆ.

2016 ಮತ್ತು 2018 ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಘಟನೆಗಳಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಈ ಅಪರಾಧಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

ಸಿಬಿಐ ಪರವಾಗಿ ಹಾಜರಾದ ವಿಶೇಷ ಸರ್ಕಾರಿ ಅಭಿಯೋಜಕ ವಿ. ಸುರೇಂದ್ರ ಮೋಹನ್, ಆರೋಪಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆಯನ್ನು ಉಲ್ಲೇಖಿಸಿ ಶಿಕ್ಷೆ ಕಡಿಮೆ ಮಾಡುವಂತೆ ಪ್ರತಿವಾದಿಗಳ ಪರ ವಕೀಲರು ಕೋರಿದ್ದಾರೆ ಎಂದು ಹೇಳಿದರು.

ಪ್ರಾಸಿಕ್ಯೂಷನ್ ಮತ್ತು ಡಿಫೆನ್ಸ್ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಇಂದು ಪ್ರಕರಣದ ಎಲ್ಲಾ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ಪ್ರಕಟಿಸಿತ್ತು. ಮಧ್ಯಾಹ್ನ ಶಿಕ್ಷೆ ಪ್ರಕಟಿಸಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!