ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ ಡ್ರೇನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ 4 ತಿಂಗಳಿಂದ ಮೃತ ಮಹಿಳೆ ನಾಗಮ್ಮ ಕಲ್ಲಾಪುವಿನಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಇದೀಗ ಮನೆಗೆ ಬಂದ ವೇಳೆ ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡ್ರೇನೇಜ್ ಪಿಟ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.
ಗುಂಡಿಯ ಮೇಲೆ ಲೋಹದ ಶೀಟ್ ಹಾಕಲಾಗಿದ್ದು, ಗುಂಡಿಯೊಳಗೆ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಚಿಕ್ಕ ಚರಂಡಿಯ ಗುಂಡಿಯೊಳಗೆ ಮಹಿಳೆ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖರಕಾರಣ ತಿಳಿದುಬರಬೇಕಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…