ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ ಡ್ರೇನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ 4 ತಿಂಗಳಿಂದ ಮೃತ ಮಹಿಳೆ ನಾಗಮ್ಮ ಕಲ್ಲಾಪುವಿನಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಇದೀಗ ಮನೆಗೆ ಬಂದ ವೇಳೆ ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡ್ರೇನೇಜ್ ಪಿಟ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.
ಗುಂಡಿಯ ಮೇಲೆ ಲೋಹದ ಶೀಟ್ ಹಾಕಲಾಗಿದ್ದು, ಗುಂಡಿಯೊಳಗೆ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಚಿಕ್ಕ ಚರಂಡಿಯ ಗುಂಡಿಯೊಳಗೆ ಮಹಿಳೆ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖರಕಾರಣ ತಿಳಿದುಬರಬೇಕಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…