ಜನ ಮನದ ನಾಡಿ ಮಿಡಿತ

Advertisement

ಪಟ್ನಾ: ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ 250 ಲಕ್ಷ ಪರಿಹಾರ – ಬಿಹಾರ್ ಸಿಎಂ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಸಿವಾನ್ ಜಿಲ್ಲೆಯ ನಿವಾಸಿ ಸಿಂಗ್ ಅವರ ಕುಟುಂಬಕ್ಕೆ ನಿತೀಶ್ 250 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಿಂಗ್ ಅವರ ಅಂತಿಮ ವಿಧಿಗಳನ್ನು ಅವರ ಪೂರ್ವಜರ ಗ್ರಾಮದಲ್ಲಿ ಸಕರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಸಿಂಗ್ ಅವರು ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಯೋಧನ ಸಾವಿಗೆ ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.
ಮೇ 9ರಂದು ಅವರು ಗಾಯಗೊಂಡಿದ್ದರು. ಸಿಂಗ್ ಅವರ ಪಾರ್ಥೀವ ಶರೀರ ಇಂದು ರಾತ್ರಿ ಹೊತ್ತಿಗೆ ರಾಜ್ಯಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 23ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಟಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ‘ಆಪರೇಷನ್ ಸಿಂಧೂರ’ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!