ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಬಿಎಸ್ಎಫ್ ಯೋಧ ರಾಮ್ ಬಾಬು ಸಿಂಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.
ಸಿವಾನ್ ಜಿಲ್ಲೆಯ ನಿವಾಸಿ ಸಿಂಗ್ ಅವರ ಕುಟುಂಬಕ್ಕೆ ನಿತೀಶ್ 250 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಿಂಗ್ ಅವರ ಅಂತಿಮ ವಿಧಿಗಳನ್ನು ಅವರ ಪೂರ್ವಜರ ಗ್ರಾಮದಲ್ಲಿ ಸಕರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಸಿಂಗ್ ಅವರು ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಯೋಧನ ಸಾವಿಗೆ ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.
ಮೇ 9ರಂದು ಅವರು ಗಾಯಗೊಂಡಿದ್ದರು. ಸಿಂಗ್ ಅವರ ಪಾರ್ಥೀವ ಶರೀರ ಇಂದು ರಾತ್ರಿ ಹೊತ್ತಿಗೆ ರಾಜ್ಯಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 23ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಟಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ‘ಆಪರೇಷನ್ ಸಿಂಧೂರ’ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…