ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರಲ್ಲಿ ಮಳೆಯ ಆರ್ಭಟ, ಧರೆಗುರುಳಿದ ಮರಗಳು..

ಉದ್ಯಾನನಗರಿಯಲ್ಲಿ ಮಂಗಳವಾರ (ಏ.13)ದಂದು ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ಬಹಳಷ್ಟು ಅವಾಂತರಗಳು ಸಂಭವಿಸಿವೆ.

ಅನೇಕ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿವೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೆಚ್‌ಬಿಆರ್ ಲೇಔಟ್‌ನಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊ0ಡಿವೆ.

ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್‌ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣನ ಆರ್ಭಟ ಜೋರಾಗಿತ್ತು. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್‌ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್ ರೋಡ್‌ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು.

ಇನ್ನು ಬಿಬಿಎಂಪಿಯ 8 ವಲಯದಲ್ಲಿ 35ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. 120ಕ್ಕೂ ಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ. ಬೆಂಗಳೂರಿನ ಕಲ್ಯಾಣನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಮರಬೊಂದು ಉರುಳಿ ಬಿದ್ದಿದೆ. ಇದರಿಂದ ಕಾರಿಗೆ ಹಾನಿಯಾಗಿದ್ದು ಮಾಲೀಕ ಬೇಸರಗೊಂಡಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಹೆಚ್‌ಬಿಆರ್ ಲೇಔಟ್‌ನ ರಸ್ತೆಯೊಂದು ಕರೆಯಂತೆ ಆಗಿದೆ. ರಸ್ತೆ ತಗ್ಗು ಇದ್ದಿದ್ದರಿಂದ ಮಳೆ ನೀರು ಶೇಖರಣೆ ಆಗಿದೆ. ಧಾರಾಕಾರ ಮಳೆಗೆ ರಸ್ತೆ ಬದಿ ಇದ್ದ ಬೃಹತ್ ಮರವೊಂದು ವಾಲಿದೆ. ಈ ದೃಶ್ಯವು ಬೆಂಗಳೂರಿನ ರೇಸ್ ಕೋರ್ಸ್ಬಳಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮಳೆ ಜೋರಾಗಿ ಬಂದಿದ್ದರಿAದ ಹಲವೆಡೆ ಮರಗಳು ಧರೆಗುರುಳಿವೆ. ಇದು ಕಮ್ಮನಹಳ್ಳಿ ಮ್ಯಾನ್ ರಸ್ತೆಯಲ್ಲಿ ಕಂಡು ಬಂದ ದೃಶ್ಯಗಳು

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!