ಉದ್ಯಾನನಗರಿಯಲ್ಲಿ ಮಂಗಳವಾರ (ಏ.13)ದಂದು ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ಬಹಳಷ್ಟು ಅವಾಂತರಗಳು ಸಂಭವಿಸಿವೆ.
ಅನೇಕ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿವೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೆಚ್ಬಿಆರ್ ಲೇಔಟ್ನಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊ0ಡಿವೆ.
ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣನ ಆರ್ಭಟ ಜೋರಾಗಿತ್ತು. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್ ರೋಡ್ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು.
ಇನ್ನು ಬಿಬಿಎಂಪಿಯ 8 ವಲಯದಲ್ಲಿ 35ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. 120ಕ್ಕೂ ಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ. ಬೆಂಗಳೂರಿನ ಕಲ್ಯಾಣನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಮರಬೊಂದು ಉರುಳಿ ಬಿದ್ದಿದೆ. ಇದರಿಂದ ಕಾರಿಗೆ ಹಾನಿಯಾಗಿದ್ದು ಮಾಲೀಕ ಬೇಸರಗೊಂಡಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಹೆಚ್ಬಿಆರ್ ಲೇಔಟ್ನ ರಸ್ತೆಯೊಂದು ಕರೆಯಂತೆ ಆಗಿದೆ. ರಸ್ತೆ ತಗ್ಗು ಇದ್ದಿದ್ದರಿಂದ ಮಳೆ ನೀರು ಶೇಖರಣೆ ಆಗಿದೆ. ಧಾರಾಕಾರ ಮಳೆಗೆ ರಸ್ತೆ ಬದಿ ಇದ್ದ ಬೃಹತ್ ಮರವೊಂದು ವಾಲಿದೆ. ಈ ದೃಶ್ಯವು ಬೆಂಗಳೂರಿನ ರೇಸ್ ಕೋರ್ಸ್ಬಳಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮಳೆ ಜೋರಾಗಿ ಬಂದಿದ್ದರಿAದ ಹಲವೆಡೆ ಮರಗಳು ಧರೆಗುರುಳಿವೆ. ಇದು ಕಮ್ಮನಹಳ್ಳಿ ಮ್ಯಾನ್ ರಸ್ತೆಯಲ್ಲಿ ಕಂಡು ಬಂದ ದೃಶ್ಯಗಳು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…