ಉದ್ಯಾನನಗರಿಯಲ್ಲಿ ಮಂಗಳವಾರ (ಏ.13)ದಂದು ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ಬಹಳಷ್ಟು ಅವಾಂತರಗಳು ಸಂಭವಿಸಿವೆ.
ಅನೇಕ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿವೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೆಚ್ಬಿಆರ್ ಲೇಔಟ್ನಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊ0ಡಿವೆ.
ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣನ ಆರ್ಭಟ ಜೋರಾಗಿತ್ತು. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್ ರೋಡ್ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು.
ಇನ್ನು ಬಿಬಿಎಂಪಿಯ 8 ವಲಯದಲ್ಲಿ 35ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. 120ಕ್ಕೂ ಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ. ಬೆಂಗಳೂರಿನ ಕಲ್ಯಾಣನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಮರಬೊಂದು ಉರುಳಿ ಬಿದ್ದಿದೆ. ಇದರಿಂದ ಕಾರಿಗೆ ಹಾನಿಯಾಗಿದ್ದು ಮಾಲೀಕ ಬೇಸರಗೊಂಡಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಹೆಚ್ಬಿಆರ್ ಲೇಔಟ್ನ ರಸ್ತೆಯೊಂದು ಕರೆಯಂತೆ ಆಗಿದೆ. ರಸ್ತೆ ತಗ್ಗು ಇದ್ದಿದ್ದರಿಂದ ಮಳೆ ನೀರು ಶೇಖರಣೆ ಆಗಿದೆ. ಧಾರಾಕಾರ ಮಳೆಗೆ ರಸ್ತೆ ಬದಿ ಇದ್ದ ಬೃಹತ್ ಮರವೊಂದು ವಾಲಿದೆ. ಈ ದೃಶ್ಯವು ಬೆಂಗಳೂರಿನ ರೇಸ್ ಕೋರ್ಸ್ಬಳಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮಳೆ ಜೋರಾಗಿ ಬಂದಿದ್ದರಿAದ ಹಲವೆಡೆ ಮರಗಳು ಧರೆಗುರುಳಿವೆ. ಇದು ಕಮ್ಮನಹಳ್ಳಿ ಮ್ಯಾನ್ ರಸ್ತೆಯಲ್ಲಿ ಕಂಡು ಬಂದ ದೃಶ್ಯಗಳು
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…