ಉದ್ಯಾನನಗರಿಯಲ್ಲಿ ಮಂಗಳವಾರ (ಏ.13)ದಂದು ಭಾರೀ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ಬಹಳಷ್ಟು ಅವಾಂತರಗಳು ಸಂಭವಿಸಿವೆ.
ಅನೇಕ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿವೆ. ರಸ್ತೆಗಳು ಜಲಾವೃತಗೊಂಡರೆ, ಸಿಲಿಕಾನ್ ಸಿಟಿಯಲ್ಲಿ ಅಲ್ಲಾಲ್ಲಿ ಮರಗಳು ಧರೆಗುರುಳಿವೆ. ಇದರಿಂದ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೆಚ್ಬಿಆರ್ ಲೇಔಟ್ನಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ಯಲಚೇನಹಳ್ಳಿ ಬಳಿ ಮೂರು ಮರಗಳು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊ0ಡಿವೆ.
ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಹೆಬ್ಬಾಳ, ಮೆಖ್ರೀ ಸರ್ಕಲ್, ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ, ಶಿವನಾಂದ, ಆರ್ಟಿ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ಇಡೀ ನಗರದ್ಯಾಂತ ವರುಣನ ಆರ್ಭಟ ಜೋರಾಗಿತ್ತು. ಇದರಿಂದ ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಬೆಂಗಳೂರಿನ ಇಂದಿರಾನಗರದಲ್ಲಿ ಭಾರೀ ಮಳೆ ಜೊತೆಗೆ ಗಾಳಿ ಬೀಸಿದ್ದು, ಎಸ್ವಿ ರಸ್ತೆ ಮೆಟ್ರೋ ಬಳಿ ಇರುವ ಓಎಂಆರ್ ರಸ್ತೆಯ ಮೇಲೆ ಮರದ ಕೊಂಬೆಗಳು ಬಿದ್ದಿವೆ. 80 ಫೀಟ್ ರೋಡ್ನಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ ಆಗಿತ್ತು.
ಇನ್ನು ಬಿಬಿಎಂಪಿಯ 8 ವಲಯದಲ್ಲಿ 35ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. 120ಕ್ಕೂ ಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ. ಬೆಂಗಳೂರಿನ ಕಲ್ಯಾಣನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಮರಬೊಂದು ಉರುಳಿ ಬಿದ್ದಿದೆ. ಇದರಿಂದ ಕಾರಿಗೆ ಹಾನಿಯಾಗಿದ್ದು ಮಾಲೀಕ ಬೇಸರಗೊಂಡಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಹೆಚ್ಬಿಆರ್ ಲೇಔಟ್ನ ರಸ್ತೆಯೊಂದು ಕರೆಯಂತೆ ಆಗಿದೆ. ರಸ್ತೆ ತಗ್ಗು ಇದ್ದಿದ್ದರಿಂದ ಮಳೆ ನೀರು ಶೇಖರಣೆ ಆಗಿದೆ. ಧಾರಾಕಾರ ಮಳೆಗೆ ರಸ್ತೆ ಬದಿ ಇದ್ದ ಬೃಹತ್ ಮರವೊಂದು ವಾಲಿದೆ. ಈ ದೃಶ್ಯವು ಬೆಂಗಳೂರಿನ ರೇಸ್ ಕೋರ್ಸ್ಬಳಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮಳೆ ಜೋರಾಗಿ ಬಂದಿದ್ದರಿAದ ಹಲವೆಡೆ ಮರಗಳು ಧರೆಗುರುಳಿವೆ. ಇದು ಕಮ್ಮನಹಳ್ಳಿ ಮ್ಯಾನ್ ರಸ್ತೆಯಲ್ಲಿ ಕಂಡು ಬಂದ ದೃಶ್ಯಗಳು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…