ಜನ ಮನದ ನಾಡಿ ಮಿಡಿತ

Advertisement

ಒಟ್ಟಾವಾ : ಕೆನಡಾ ವಿದೇಶಾಂಗ ಸಚಿವರಾಗಿ ಅನಿತಾ ಆನಂದ್ ಪ್ರಮಾಣವಚನ

ಭಾರತೀಯ ಮೂಲದ ಅನಿತಾ ಆನಂದ್, ಕೆನಡಾದ ಮಾರ್ಕ್ ಕಾರ್ನಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಭಗವದ್ಗೀತೆಯ ಗ್ರಂಥ ಎಲ್ಲರ ಗಮನ ಸೆಳೆದಿದೆ. ಅನಿತಾ ಭಗವದ್ಗೀತೆ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಅನಿತಾ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಕೈಯಲ್ಲಿ ಭಗವದ್ಗೀತೆಯನ್ನು ಹಿಡಿದು ಎಲ್ಲರ ಗಮನ ಸೆಳೆದಿದ್ದರು. ಆ ಮೂಲಕ ಅವರು ಭಾರತೀಯ ಸಂಸ್ಕೃತಿ, ಸನಾತನ ಧರ್ಮವನ್ನು ಪರಿಪಾಲಿಸಿದ್ದಾರೆ. ಇದೀಗ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿವೆ.

ಕೆನಡಾದ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವುದು ನನಗೆ ಗೌರವ ತಂದಿದೆ. ಸುರಕ್ಷಿತ, ಉತ್ತಮ ಜಗತ್ತನ್ನು ನಿರ್ಮಿಸಲು ಮತ್ತು ಕೆನಡಿಯನ್ನರಿಗೆ ತಲುಪಿಸಲು ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ನಮ್ಮ ತಂಡದೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!