ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ಉಡುಪಿ ಜಿಲ್ಲೆಯ ಶಿರ್ವದ ಪಿಲಾರು ಕಾಡಿನ ಬಳಿ ಕಂಡುಬಂದಿದೆ. ದೈತ್ಯ ಗಾತ್ರದ ಈ ಕಾಡುಕೋಣವನ್ನು ಕಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಆಹಾರ ಅರಸಿಕೊಂಡು ನಾಡಿಗೆ ಬಂದಿರುವ ಈ ಕಾಡುಕೋಣವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಮುತುವರ್ಜಿಯಲ್ಲಿ ಮತ್ತೆ ಕಾಡಿಗೆ ಕಳುಹಿಸಿ ಕೊಡಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್, ಧೀರಜ್ ಮತ್ತು ಸಂಗಡಿಗರು ಕಾಡುಕೋಣವನ್ನು ಮರಳಿ ಕಾಡಿಗೆ ಕಳುಹಿಸಿಕೊಡುವಲ್ಲಿ ಶ್ರಮಿಸಿದರು. ಹುಲಿ, ಚಿರತೆ, ಆನೆ, ಕಾಡುಕೋಣ ಮುಂತಾದ ಅನೇಕ ಕಾಡುಪ್ರಾಣಿಗಳು ಇತ್ತೀಚೆಗೆ ನಾಡಿನತ್ತ ಆಗಮಿಸುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಿ ಕಾರ್ಯಾಚರಿಸಬೇಕೆಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…