ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯಾದ್ಯಂತ ಅಬ್ಬರಿಸಿದ ಮಳೆ; ಕರ್ನಾಟಕದಲ್ಲಿ ಸಿಡಿಲಿಗೆ ಒಂದೇ ದಿನ ಏಳು ಮಂದಿ ಬಲಿ

ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಕರಾವಳಿ, ಮಲೆನಾಡು, ಒಳನಾಡುಗಳಲ್ಲಿ ವಿವಿಧೆಡೆ ಬೆಳೆಗಳಿಗೆ ಹಾನಿಯಾಗಿದೆ. ಜೋರು ಗಾಳಿ ಮಳೆಗೆ ಬೆಳೆಗಳು ನೆಲಕಚ್ಚಿವೆ. ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಜಮೀನಿನ ಕೆಲಸದಲ್ಲಿ ತೊಡಗಿದ್ದ ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ಯಂಕಪ್ಪ ಜಾಡಿ (45) ಮೃತರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು 29 ವರ್ಷದ ಯುವ ರೈತ ಸುನೀಲ ಸುರೇಶಪ್ಪ ಕಾಳೇರ ಸಾವನಪ್ಪಿದ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!