ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಕರಾವಳಿ, ಮಲೆನಾಡು, ಒಳನಾಡುಗಳಲ್ಲಿ ವಿವಿಧೆಡೆ ಬೆಳೆಗಳಿಗೆ ಹಾನಿಯಾಗಿದೆ. ಜೋರು ಗಾಳಿ ಮಳೆಗೆ ಬೆಳೆಗಳು ನೆಲಕಚ್ಚಿವೆ. ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಜಮೀನಿನ ಕೆಲಸದಲ್ಲಿ ತೊಡಗಿದ್ದ ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ಜಾಡಿ (45) ಮೃತರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು 29 ವರ್ಷದ ಯುವ ರೈತ ಸುನೀಲ ಸುರೇಶಪ್ಪ ಕಾಳೇರ ಸಾವನಪ್ಪಿದ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…