ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೊಶ ವ್ಯಕ್ತವಾಗಿತ್ತು. ಈ ಬಗ್ಗೆ ನಗರದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸದ್ಯ ಈ ಪ್ರಕರಣದ ರದ್ದು ಕೋರಿ ಸೋನು ನಿಗಮ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆದರೆ ಗಾಯಕ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಮೇ.15 ಅಂದರೆ ನಾಳೆಗೆ ಮುಂದೂಡಿದೆ. ಇನ್ನು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದ್ರಿಂದ ಅವಲಹಳ್ಳಿ ಪೊಲೀಸರು ಸೋನು ನಿಗಮ್ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಮನವಿ ಮಾಡಿದ್ದಾನೆ.
ಆಗ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿದ್ದಾರೆ. ಅಲ್ಲದೇ ಮಾತಾಡುವ ಬರದಲ್ಲಿ ಪಹಲ್ಗಾಮ್ ದಾಳಿಯನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೆಲ್ಲಾ ಆದ ಮೇಲೆ ತಮ್ಮ ಹೇಳಿಕೆಯನ್ನು ಸೋನು ನಿಗಮ್ ಅವರು ಸಮರ್ಥನೆ ಮಾಡಿಕೊಂಡಿದ್ದರು. ವಿಡಿಯೋ ಮೂಲಕ ಮಾತನಾಡಿದ್ದ ಸೋನು ನಿಗಮ್ ನಾನು ಕನ್ನಡಿಗರ ವಿರುದ್ಧ ಮಾತನಾಡಿಲ್ಲ. ಅಲ್ಲಿದ್ದ ಕೆಲ ಪುಂಡರ ಕುರಿತು ಮಾತನಾಡಿದ್ದೇ. ದಯವಿಟ್ಟು ಅದನ್ನು ದೊಡ್ಡದು ಮಾಡಬೇಡಿ. ಇಲ್ಲಿಗೆ ಬಿಡಿ ಎಂದು ಕೇಳಿದ್ದರು. ಆದರೆ ಇದಕ್ಕೂ ಕನ್ನಡಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…