ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೊಶ ವ್ಯಕ್ತವಾಗಿತ್ತು. ಈ ಬಗ್ಗೆ ನಗರದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸದ್ಯ ಈ ಪ್ರಕರಣದ ರದ್ದು ಕೋರಿ ಸೋನು ನಿಗಮ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆದರೆ ಗಾಯಕ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಮೇ.15 ಅಂದರೆ ನಾಳೆಗೆ ಮುಂದೂಡಿದೆ. ಇನ್ನು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದ್ರಿಂದ ಅವಲಹಳ್ಳಿ ಪೊಲೀಸರು ಸೋನು ನಿಗಮ್ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಮನವಿ ಮಾಡಿದ್ದಾನೆ.
ಆಗ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿದ್ದಾರೆ. ಅಲ್ಲದೇ ಮಾತಾಡುವ ಬರದಲ್ಲಿ ಪಹಲ್ಗಾಮ್ ದಾಳಿಯನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೆಲ್ಲಾ ಆದ ಮೇಲೆ ತಮ್ಮ ಹೇಳಿಕೆಯನ್ನು ಸೋನು ನಿಗಮ್ ಅವರು ಸಮರ್ಥನೆ ಮಾಡಿಕೊಂಡಿದ್ದರು. ವಿಡಿಯೋ ಮೂಲಕ ಮಾತನಾಡಿದ್ದ ಸೋನು ನಿಗಮ್ ನಾನು ಕನ್ನಡಿಗರ ವಿರುದ್ಧ ಮಾತನಾಡಿಲ್ಲ. ಅಲ್ಲಿದ್ದ ಕೆಲ ಪುಂಡರ ಕುರಿತು ಮಾತನಾಡಿದ್ದೇ. ದಯವಿಟ್ಟು ಅದನ್ನು ದೊಡ್ಡದು ಮಾಡಬೇಡಿ. ಇಲ್ಲಿಗೆ ಬಿಡಿ ಎಂದು ಕೇಳಿದ್ದರು. ಆದರೆ ಇದಕ್ಕೂ ಕನ್ನಡಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…