ಭಾರತದ ತಾಕತ್ತು ಈಗ ಇಡೀ ಜಗತ್ತಿಗೆ ಗೊತ್ತಾಗಿದೆ. ಕ್ಯಾತೆ ತೆಗೆದ ವೈರಿ ರಾಷ್ಟ್ರಕ್ಕೆ ಭಾರತ ಆತ್ಮನಿರ್ಭರದ ಅಸ್ತ್ರಗಳಿಂದಲೇ ಮುಟ್ಟಿ ನೋಡಿಕೊಳ್ಳುವ ಪೆಟ್ಟು ಕೊಡಲಾಗಿದೆ. ಭಾರತ ದೇಶಕ್ಕಾಗಿ ಹೋರಾಡಿದ ರೀತಿ ಕಂಡು ಅಮೆರಿಕಾ, ಚೀನಾದಂತಹ ದೈತ್ಯ ರಾಷ್ಟ್ರಗಳೇ ದಂಗಾಗಿ ಹೋಗಿವೆ.
ಆಪರೇಷನ್ ಸಿಂಧೂರ ಬಳಿಕ ಭಾರತದ ಬ್ರಹ್ಮೋಸ್ ಕ್ಷಿಪಣಿಗೆ ಭಾರೀ ಬೇಡಿಕೆ ಬಂದಿದೆ. ಬ್ರಹ್ಮೋಸ್ ಕ್ಷಿಪಣಿ ಪಾಕ್ ಏರ್ ಬೇಸ್, ಉಗ್ರ ನೆಲೆಯನ್ನ ಛಿದ್ರ, ಛಿದ್ರ ಮಾಡಿದ್ದು, ಎಲ್ಲರ ಗಮನ ಸೆಳೆದಿದೆ. ಭಾರತದ ಬ್ರಹ್ಮೋಸ್ ಕ್ಷಿಪಣಿಗಾಗಿ ಜಗತ್ತಿನ 17 ದೇಶಗಳಿಂದ ಈಗ ಬೇಡಿಕೆ ಬಂದಿದೆ. ಭೂಮಿಯ ಮೇಲಿನ ಅತ್ಯಂತ ವೇಗದ ಕ್ರೂಸ್ ಮಿಸೈಲ್ ಬ್ರಹ್ಮೋಸ್ ಭೂಮಿ, ಸಮುದ್ರ, ವಾಯು ನೆಲೆಯಿಂದ ನಿಖರವಾದ ದಾಳಿ ಮಾಡುತ್ತೆ ಭಾರತದ ಬ್ರಹ್ಮಾಸ್ತ್ರ ಅಂತಲೇ ಕರೆಸಿಕೊಳ್ಳುವ ಬ್ರಹ್ಮೋಸ್ ಬರೋಬ್ಬರಿ 800 ಕಿಲೋ ಮೀಟರ್ ರೇಂಜ್ ಹೊಂದಿದ್ದು, ನಿಮಿಷಗಳಲ್ಲಿ 300 ಕಿಲೋ ಮೀಟರ್ ಸಾಗುವ ಸಾಮರ್ಥ್ಯವಿದೆ.
ಒಂದೇ ಸಾರಿ 300 ಕೆಜಿಯ ಸ್ಫೋಟಕ ಹೊತ್ತೊಯ್ಯಬಲ್ಲ ಸಾಮರ್ಥ್ಯವಿದ್ದು, ಜಿಪಿಎಸ್ ಆಧಾರಿತ ಗೈಡೆಡ್ ಸಿಸ್ಟಮ್ ಬ್ರಹ್ಮೋಸ್ನಲ್ಲಿದೆ. ಇನ್ನೂ ವಿಶೇಷ ಏನಂದ್ರೆ ಸ್ವಯಂ ರಕ್ಷಣೆಯ ಸಿಗ್ನಲ್ ಜಾಮಿಂಗ್ ವ್ಯವಸ್ಥೆ ಕೂಡ ಬ್ರಹ್ಮೋಸ್ನಲ್ಲಿದೆ. 8.4 ಮೀಟರ್ ಉದ್ದ, 6 ಮೀಟರ್ ಅಗಲವಿರೋ ಮಿಸೈಲ್ ಗುರಿಯಿಟ್ರೆ ಟಾರ್ಗೆಟ್ ಮಿಸ್ಸೇ ಆಗಲ್ಲ. ಬ್ರಹ್ಮೋಸ್ನಲ್ಲಿ ಸ್ಟೆಲ್ತ್ ಫೀಚರ್ ಇದ್ದು, ರಾಡಾರ್ ಕಣ್ಣಿಗೆ ಬೀಳುವ ಸಾಧ್ಯತೆ ಕಡಿಮೆ ಮಾಡುವ ರೀತಿಯಲ್ಲಿ ಕ್ಷಿಪಣಿಯನ್ನ ಅಭಿವೃದ್ಧಿ ಪಡಿಸಲಾಗಿದೆ. ಶತ್ರುದೇಶದ ರಾಡಾರ್ನಲ್ಲೇ ಸಾಗಿ ನಿಶ್ಚಿತ ಗುರಿಯನ್ನ ಈ ಬ್ರಹ್ಮೋಸ್ ಹೊಡೆದುರುಳಿಸುತ್ತೆ. ನೀರು ನೆಲ ಆಕಾಶ ಮಾತ್ರವಲ್ಲ ಹಡಗು, ಪೈಟರ್ ಜೆಟ್, ಸಬ್ ಮರೀನ್ ಮೂಲಕ ಹೇಗ್ ಬೇಕಾದ್ರೂ ದಾಳಿ ನಡೆಸಬಹುದು. ಬ್ರಹ್ಮೋಸ್ ಹೆಸರು ಹೇಗೆ ಬಂತು ಭಾರತದ ಬ್ರಹ್ಮಪುತ್ರ ನದಿ ಮತ್ತು ರಷ್ಯಾದ ಮಾಸ್ಕವಾ ನದಿಗಳ ಹೆಸರಿನಿಂದ ಇದಕ್ಕೆ ಬ್ರಹ್ಮೋಸ್ ಅಂತ ಹೆಸರಿಡಲಾಗಿದೆ. ಇದು ಭಾರತ ಹಾಗೂ ರಷ್ಯಾದ ಸ್ನೇಹ ಸಂಬAಧಕ್ಕೆ ಉದಾಹರಣೆಯಾಗಿದೆ. ಈ ಕ್ಷಿಪಣಿಯ ಪರಿಕಲ್ಪನೆಯು 1990ರ ದಶಕದಲ್ಲಿ ರೂಪುಗೊಂಡಿತ್ತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…