‘ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಮೇ 15ರಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕರಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಪ್ಲೆಕ್ಸ್, ಬ್ಯಾನರ್ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ವಿನಂತಿ ಮಾಡಿದ್ದಾರೆ.ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ ಆಶಿರ್ವದಿಸಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…