ಉಡುಪಿ: ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಶಾಂತವಾಗಿದ್ದ ಕಡಲನ್ನು ನೋಡುತ್ತಾ ಮೈಮರೆತ್ತಿದ್ದ ಪ್ರವಾಸಿಗರು, ತಮ್ಮ ಕಾಯಕದಲ್ಲಿ ಬ್ಯುಸಿಯಾಗಿದ್ದ ಮೀನುಗಾರರು ಏಕಾಏಕಿಯಾಗಿ ಅಪ್ಪಳಿಸಿದ ದೊಡ್ಡ ಸದ್ದಿಗೆ ದಿಕ್ಕಾಪಾಲಾಗಿ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನ.
ಹೌದು, ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಯಿತು.
ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಅಣುಕು ಕಾರ್ಯಾಚರಣೆ ಮಾಡಲಾಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.
ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.
ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ಮಾಡಲಾಗಿದೆ. ಮೀನುಗಾರರು 3 ಬೋಟ್ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಎಸ್ಪಿ ಮಿಥುನ್ ತಿಳಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…