ಉಡುಪಿ: ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಶಾಂತವಾಗಿದ್ದ ಕಡಲನ್ನು ನೋಡುತ್ತಾ ಮೈಮರೆತ್ತಿದ್ದ ಪ್ರವಾಸಿಗರು, ತಮ್ಮ ಕಾಯಕದಲ್ಲಿ ಬ್ಯುಸಿಯಾಗಿದ್ದ ಮೀನುಗಾರರು ಏಕಾಏಕಿಯಾಗಿ ಅಪ್ಪಳಿಸಿದ ದೊಡ್ಡ ಸದ್ದಿಗೆ ದಿಕ್ಕಾಪಾಲಾಗಿ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನ.
ಹೌದು, ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಯಿತು.
ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಅಣುಕು ಕಾರ್ಯಾಚರಣೆ ಮಾಡಲಾಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.
ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.
ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ಮಾಡಲಾಗಿದೆ. ಮೀನುಗಾರರು 3 ಬೋಟ್ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಎಸ್ಪಿ ಮಿಥುನ್ ತಿಳಿಸಿದರು.
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…