ಮುಂದಿನ ಡಿಸೆಂಬರ್ ತಿಂಗಳೊಳಗಡೆ 24 ಗಂಟೆ ಕುಡಿಯುವ ನೀರನ್ನು ಉಳ್ಳಾಲ ತಾಲೂಕಿನ ಜನತೆಗೆ ಪುರೈಸಲಾಗುವುದು. ಈಗಾಗಲೇ ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ. ಹಾಗೆಯೇ ಪೈಪ್ ಲೈನ್ ಕಾಮಗಾರಿ ಕೈಗೊಳ್ಳುವಾಗ ಹಣ ಪಡೆದುಕೊಂಡಲ್ಲಿ ನೇರವಾಗಿ ದೂರು ನೀಡಿ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಅವರು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಲಾಲ್ ಬಾಗ್ ಪಾನೀರು ಸಂಪರ್ಕಿಸುವ ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿದರು ಕೋಟೆಕಾರು ಪ.ಪಂ ವ್ಯಾಪ್ತಿಯ ಜಲಾಲ್ಬಾಗ್ ನಿಂದ ಪಾನೀರ್ ಸೈಟ್ ಸಂಪರ್ಕಿಸುವ ರಸ್ತೆಗೆ ಬಹಳಷ್ಟು ಬೇಡಿಕೆಯಿತ್ತು. ತೊಕ್ಕೊಟ್ಟು, ದೇರಳಕಟ್ಟೆ, ಮೆಲ್ಕಾರ್, ನಾಟೆಕಲ್ ಸಂಪರ್ಕಿಸುವ ಲಿಂಕ್ ರಸ್ತೆಯೂ ಆಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಪಟ್ಟಣ ಪಂಚಾಯತ್ ನಲ್ಲಿ ಆಡಳಿತವಿಲ್ಲದ ಸಂದರ್ಭ ತಾನು ವಿಶೇಷ ಅನುದಾನವನ್ನು ಒದಗಿಸಿದ್ದೆನು. ಆದರೆ ಜಾಗದ ತಕರಾರಿನಿಂದ ಕಾಮಗಾರಿ ವಿಳಂಬವಾಯಿತು. ಆದರೆ ಕಣಚೂರು ಮೋನು ಹಾಗೂ ಲವೀನಾ ಕುಟುಂಬಸ್ಥರ ಸಹಕಾರದಿಂದಾಗಿ ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಅಲ್ಲದೆ ಹೆಚ್ಚುವರಿ ರೂ. 3ಲಕ್ಷ ಅನುದಾನವನ್ನು ಪೂರೈಸಲಾಗಿದೆ ಎಂದ ಅವರು ಜಲಾಲ್ ಬಾಗ್ ಪ್ರದೇಶವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದ್ದು, ಮೊದಲ ಹಂತವಾಗಿ ಮಸೀದಿ ಕ್ರಾಸ್, ದ್ವಿತೀಯ ಹಂತವಾಗಿ ಟರ್ನಿಂಗ್ ನಿಂದ ಆರೀಫ್ ಮನೆವರೆಗೆ ಅಭಿವೃದ್ಧಿ ಕಡೇಯದಾಗಿ ರಸ್ತೆಯ ಕೊನೆಯವರೆಗೂ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ.
ಮುಂದಿನ ದಿನಗಳಲ್ಲಿಯೂ ಜಲಾಲ್ ಬಾಗ್ ಪಾನೀರು ವಾರ್ಡಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು. ಡಿಸೆಂಬರ್ ತಿಂಗಳೊಳಗೆ ಉಳ್ಳಾಲ ತಾಲೂಕಿನ ಉದ್ದಕ್ಕೂ 24 ಗಂಟೆ ಕುಡಿಯುವ ನೀರಿನ ಯೋಜನೆ ಆರಂಭವಾಗುವುದು. ಪ್ರತಿಯೊಂದು ಮನೆಗಳಿಗೂ ಮೀಟರ್ ಅಳವಡಿಕೆ ಮಾಡಲಾಗಿದೆ. ಬಡವರಿಗೂ ಅನುಕೂಲಕರವಾಗುವ ಉದ್ದೇಶದಿಂದ ಮೀಟರ್ ಅಳವಡಿಸಲಾಗಿದ್ದು, ಪೈಪ್ ಲೈನ್ ಫಿಟಿಂಗ್ ಕಾಮಗಾರಿ ಸಂಪೂರ್ಣ ಉಚಿತವಾಗಿದೆ. ಕಾಮಗಾರಿ ನಡೆಸುವವರು ಹಣ ಕೇಳುತ್ತಿರುವ ದೂರು ಕೇಳಿಬಂದಿದೆ ಎಂದರು. ಈ ಸಂದರ್ಭ ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಕೋಟೆಕಾರ್ ಪ. ಪಂಚಾಯತ್ ಮಾಜಿ ಕೌನ್ಸಿಲರ್ ಡಿ.ಎಮ್ ಮಹಮ್ಮದ್ ,ಕೌನ್ಸಿಲರ್ ಆಯಿಶಾ ಡಿ ಅಬ್ಬಾಸ್, ಜಲಾಲ್ ಬಾಗ್ ಅರಫಾ ಮಸೀದಿ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಜಲಾಲ್ ಬಾಗ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಅಲಿ ಹಸನ್, ಸಫಿಯ ಪನೀರ್, ಹಮೀದ್ ಪಜೀರ್, ಹಮೀದ್ ಜಲಾಲ್ ಬಾಗ್, ಸಾಮಾಜಿಕ ಮುಖಂಡ ಇಬ್ರಾಹಿಂ ಕತಾರ್ ಹಾಗೂ ಜಲಾಲ್ ಬಾಗ್ ನಾಗರಿಕರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…