ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.
ಮುಂದುವರೆಸಿ ಮಾತನಾಡಿದ ಅವರು 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…