ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.
ಮುಂದುವರೆಸಿ ಮಾತನಾಡಿದ ಅವರು 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…