ಜನ ಮನದ ನಾಡಿ ಮಿಡಿತ

Advertisement

ಪಾರಾದೀಪ್ : ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿ ಪತ್ತೆ; ಹೈ ಅಲರ್ಟ್ ಘೋಷಣೆ

ಬುಧವಾರ ಒಡಿಶಾದ ಪಾರಾದೀಪ್‌ ಬಂದರಿಗೆ ಬಂದ ಕಚ್ಚಾ ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿಗಳು ಪತ್ತೆಯಾಗಿದ್ದು ಸದ್ಯ ಬಂದರಿನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ದಕ್ಷಿಣ ಕೊರಿಯಾದಿಂದ ಸಿಂಗಪುರ ಮಾರ್ಗವಾಗಿ ಒಡಿಶಾ ಬಂದ ‘MT Siren II’ ಹಡಗು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಲಿಮಿಟೆಡ್‌ಗಾಗಿ ಕಚ್ಚಾತೈಲ ಹೊತ್ತು ತಂದಿತ್ತು. ಇದರಲ್ಲಿರುವ 21 ಸಿಬ್ಬಂದಿ ಪಾಕಿಸ್ತಾನ ಪ್ರಜೆಗಳು ಪತ್ತೆಯಾಗಿದ್ದಾರೆ. ಸದ್ಯ ಇವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಒಡಿಶಾ ಕರಾವಳಿ ಪೊಲೀಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿ ಬಿಗಿ ಭದ್ರತೆ ಕೈಗೊಂಡಿದ್ದು ಪಾರಾದೀಪ್‌ನಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಹಡಗಿನಲ್ಲಿ ಸುಮಾರು 11,350 ಮೆಟ್ರಿಕ್‌ ಟನ್‌ನಷ್ಟು ಕಚ್ಚಾ ತೈಲದ ಸರಕಿದ್ದು, ಇದನ್ನು ಸ್ಥಳಾಂತರಿಸುವ ಸಮಯದಲ್ಲಿ ಯಾವುದೇ ಸಿಬ್ಬಂದಿ ಹಡಗಿನಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಡಗಿನಲ್ಲಿ ಒಟ್ಟು 25 ಸಿಬ್ಬಂದಿಗಳಿದ್ದರು. ಈ ಪೈಕಿ 21 ಮಂದಿ ಪಾಕ್‌ ಪ್ರಜೆಗಳಾಗಿದ್ದಾರೆ.

ಈಗಾಗಲೇ ಪ್ರಧಾನಿ ಮೋದಿ ಅವರು ಭಾರತದ ಗಡಿ ದಾಟುವ ದುಸ್ಸಾಹಸಕ್ಕೆ ಪಾಕಿಗಳು ಕೈ ಹಾಕಿದರೆ ಸರ್ವನಾಶ ಖಚಿತ ಎಂದ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಪಂಜಾಬ್‌ನ ಅದಂಪುರದ ವಾಯುನೆಲೆಯಲ್ಲಿ ಮಂಗಳವಾರ ಯೋಧರನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಆಪರೇಷನ್‌ ಸಿಂದೂರ ಪಾಕಿಸ್ತಾನದ ಪಾಲಿಗೆ ಲಕ್ಷ್ಮಣ ರೇಖೆ ಇದ್ದಂತೆ ಇದನ್ನೂ ದಾಟಿ ಬಂದರೆ ಸರ್ವನಾಶ ಖಚಿತ ಎಂದಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!