ಬುಧವಾರ ಒಡಿಶಾದ ಪಾರಾದೀಪ್ ಬಂದರಿಗೆ ಬಂದ ಕಚ್ಚಾ ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿಗಳು ಪತ್ತೆಯಾಗಿದ್ದು ಸದ್ಯ ಬಂದರಿನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
ದಕ್ಷಿಣ ಕೊರಿಯಾದಿಂದ ಸಿಂಗಪುರ ಮಾರ್ಗವಾಗಿ ಒಡಿಶಾ ಬಂದ ‘MT Siren II’ ಹಡಗು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ಗಾಗಿ ಕಚ್ಚಾತೈಲ ಹೊತ್ತು ತಂದಿತ್ತು. ಇದರಲ್ಲಿರುವ 21 ಸಿಬ್ಬಂದಿ ಪಾಕಿಸ್ತಾನ ಪ್ರಜೆಗಳು ಪತ್ತೆಯಾಗಿದ್ದಾರೆ. ಸದ್ಯ ಇವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಒಡಿಶಾ ಕರಾವಳಿ ಪೊಲೀಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿ ಬಿಗಿ ಭದ್ರತೆ ಕೈಗೊಂಡಿದ್ದು ಪಾರಾದೀಪ್ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಹಡಗಿನಲ್ಲಿ ಸುಮಾರು 11,350 ಮೆಟ್ರಿಕ್ ಟನ್ನಷ್ಟು ಕಚ್ಚಾ ತೈಲದ ಸರಕಿದ್ದು, ಇದನ್ನು ಸ್ಥಳಾಂತರಿಸುವ ಸಮಯದಲ್ಲಿ ಯಾವುದೇ ಸಿಬ್ಬಂದಿ ಹಡಗಿನಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಡಗಿನಲ್ಲಿ ಒಟ್ಟು 25 ಸಿಬ್ಬಂದಿಗಳಿದ್ದರು. ಈ ಪೈಕಿ 21 ಮಂದಿ ಪಾಕ್ ಪ್ರಜೆಗಳಾಗಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಅವರು ಭಾರತದ ಗಡಿ ದಾಟುವ ದುಸ್ಸಾಹಸಕ್ಕೆ ಪಾಕಿಗಳು ಕೈ ಹಾಕಿದರೆ ಸರ್ವನಾಶ ಖಚಿತ ಎಂದ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಪಂಜಾಬ್ನ ಅದಂಪುರದ ವಾಯುನೆಲೆಯಲ್ಲಿ ಮಂಗಳವಾರ ಯೋಧರನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಆಪರೇಷನ್ ಸಿಂದೂರ ಪಾಕಿಸ್ತಾನದ ಪಾಲಿಗೆ ಲಕ್ಷ್ಮಣ ರೇಖೆ ಇದ್ದಂತೆ ಇದನ್ನೂ ದಾಟಿ ಬಂದರೆ ಸರ್ವನಾಶ ಖಚಿತ ಎಂದಿದ್ದರು.
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…