ಬುಧವಾರ ಒಡಿಶಾದ ಪಾರಾದೀಪ್ ಬಂದರಿಗೆ ಬಂದ ಕಚ್ಚಾ ತೈಲ ಹಡಗಿನಲ್ಲಿ 21 ಪಾಕಿಸ್ತಾನಿ ಸಿಬ್ಬಂದಿಗಳು ಪತ್ತೆಯಾಗಿದ್ದು ಸದ್ಯ ಬಂದರಿನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
ದಕ್ಷಿಣ ಕೊರಿಯಾದಿಂದ ಸಿಂಗಪುರ ಮಾರ್ಗವಾಗಿ ಒಡಿಶಾ ಬಂದ ‘MT Siren II’ ಹಡಗು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ಗಾಗಿ ಕಚ್ಚಾತೈಲ ಹೊತ್ತು ತಂದಿತ್ತು. ಇದರಲ್ಲಿರುವ 21 ಸಿಬ್ಬಂದಿ ಪಾಕಿಸ್ತಾನ ಪ್ರಜೆಗಳು ಪತ್ತೆಯಾಗಿದ್ದಾರೆ. ಸದ್ಯ ಇವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಒಡಿಶಾ ಕರಾವಳಿ ಪೊಲೀಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿ ಬಿಗಿ ಭದ್ರತೆ ಕೈಗೊಂಡಿದ್ದು ಪಾರಾದೀಪ್ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಹಡಗಿನಲ್ಲಿ ಸುಮಾರು 11,350 ಮೆಟ್ರಿಕ್ ಟನ್ನಷ್ಟು ಕಚ್ಚಾ ತೈಲದ ಸರಕಿದ್ದು, ಇದನ್ನು ಸ್ಥಳಾಂತರಿಸುವ ಸಮಯದಲ್ಲಿ ಯಾವುದೇ ಸಿಬ್ಬಂದಿ ಹಡಗಿನಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಡಗಿನಲ್ಲಿ ಒಟ್ಟು 25 ಸಿಬ್ಬಂದಿಗಳಿದ್ದರು. ಈ ಪೈಕಿ 21 ಮಂದಿ ಪಾಕ್ ಪ್ರಜೆಗಳಾಗಿದ್ದಾರೆ.
ಈಗಾಗಲೇ ಪ್ರಧಾನಿ ಮೋದಿ ಅವರು ಭಾರತದ ಗಡಿ ದಾಟುವ ದುಸ್ಸಾಹಸಕ್ಕೆ ಪಾಕಿಗಳು ಕೈ ಹಾಕಿದರೆ ಸರ್ವನಾಶ ಖಚಿತ ಎಂದ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಪಂಜಾಬ್ನ ಅದಂಪುರದ ವಾಯುನೆಲೆಯಲ್ಲಿ ಮಂಗಳವಾರ ಯೋಧರನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಆಪರೇಷನ್ ಸಿಂದೂರ ಪಾಕಿಸ್ತಾನದ ಪಾಲಿಗೆ ಲಕ್ಷ್ಮಣ ರೇಖೆ ಇದ್ದಂತೆ ಇದನ್ನೂ ದಾಟಿ ಬಂದರೆ ಸರ್ವನಾಶ ಖಚಿತ ಎಂದಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…