ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹಾಸನ : ಸಿಎಂ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿಯ ಶವ ಪ್ರಪಾತದಲ್ಲಿ ಪತ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಪತ್ತೆಯಾಗಿದೆ. ಇನ್ನು, ಸಂಪತ್​ ಅವರು ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ ಸಂಪತ್​ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಅವರದ್ದೇ ಕಾರಿನಲ್ಲಿ ಶವ ತಂದು ಬಿಸಾಡಿದ್ದಾರೆ ಎಂಬುವುದು ತಿಳಿದುಬಂದಿದೆ.

ಸಂಪತ್​ ಅವರು ಏಪ್ರಿಲ್ 9 ರಂದು ಕುಶಾಲನಗರದಿಂದ ತಮ್ಮ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದರು. ಏಪ್ರಿಲ್ 10 ರಂದು ಕಲ್ಲಹಳ್ಳಿ ಗ್ರಾಮದ ಬಳಿ ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತ ಹರಿದಿರುವುದನ್ನು ಗಮನಿಸಿದ್ದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಯಸಳೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅತ್ತ, ಕುಶಾಲನಗರ ಪೊಲೀಸ್​ ಠಾಣೆಯಲ್ಲಿ ಸಂಪತ್ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್​ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.

ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್​ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್​ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.

2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್​ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.

ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್​ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್​ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.

 

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!