ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಪತ್ತೆಯಾಗಿದೆ. ಇನ್ನು, ಸಂಪತ್ ಅವರು ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ ಸಂಪತ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಅವರದ್ದೇ ಕಾರಿನಲ್ಲಿ ಶವ ತಂದು ಬಿಸಾಡಿದ್ದಾರೆ ಎಂಬುವುದು ತಿಳಿದುಬಂದಿದೆ.
ಸಂಪತ್ ಅವರು ಏಪ್ರಿಲ್ 9 ರಂದು ಕುಶಾಲನಗರದಿಂದ ತಮ್ಮ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದರು. ಏಪ್ರಿಲ್ 10 ರಂದು ಕಲ್ಲಹಳ್ಳಿ ಗ್ರಾಮದ ಬಳಿ ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತ ಹರಿದಿರುವುದನ್ನು ಗಮನಿಸಿದ್ದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಯಸಳೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅತ್ತ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಸಂಪತ್ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.
2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.
ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.
2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.
ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…