ಪುತ್ತೂರು ಪಡೀಲ್ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್ವೊಂದರ ಕಾರ್ಮಿಕ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.14ರ ಬೆಳಗ್ಗೆ ಬೆಳಕಿಗೆ ಬಂದಿದೆ.

ಪದ್ಮನಾಭ ಅವರು ಮೇ.13 ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ ಹಿಂತಿರುಗಿದ ವೇಳೆ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.



