ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಲಿಖಿತ್ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಬಿ.ಸಿ.ರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…