ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ಮಹಿಳೆಯೊಬ್ಬರ ಬಳಿ ಮುಖ್ಯ ಲೆಕ್ಕಿಗ ಹಾಗೂ ಎಫ್.ಡಿ.ಎ ಲಂಚದ ಬೇಡಿಕೆ ಇಟ್ಟಿದ್ದಾರೆ.
ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ರು. 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿದ್ದು, ಜೂನ್ 2024 ರಂದು ಮರಣ ಹೊಂದಿದ್ದಾರೆ. ಬಳಿಕ ಮಹಿಳೆ ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಬಳಿ ಗಂಡನ ಮರಣ ಉಪದಾನ ನೀಡುವಂತೆ ಕೇಳಿದ್ರು. ಈ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಮಾತ್ರ ಆಗಿರ್ಲಿಲ್ಲ.
ಹಣ ಜಮೆ ಮಾಡಲು ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಎಫ್.ಡಿ.ಎ ಬಸವೆ ಗೌಡ ಐದು ಸಾವಿರ ಲಂಚದ ಬೇಡಿಕೆಯನ್ನಿಟ್ಟಿದ್ದಾರೆ. ಈ ಬಗ್ಗೆ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ರೆಡ್ ಹ್ಯಾಂಡ್ ಆಗಿ ಲಂಚಕೋರರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…