ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗಕ್ಕೆ ತಯಾರಾಗಿದ್ದ ಆಕೆ ಕರ್ನಾಟಕದ ವೀರ ಸೊಸೆ. ಆಕೆಯ ವಿರುದ್ಧ ಈ ರೀತಿಯ ಅವಹೇಳನಕಾರಿ ಮಾತುಗಳನ್ನಾಡುವ ಬಿಜೆಪಿ ನಾಯಕರ ಮನಸ್ಥಿತಿಯನ್ನು ಇದು ತೋರಿಸುತ್ತದೆ ಎಂದ್ರು.ಭಾರತ- ಪಾಕಿಸ್ತಾನ ಯುದ್ಧದ ಕುರಿತು ಚಕ್ರವರ್ತಿ ಸೂಲಿಬೆಲೆ ಸುಳ್ಳು ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿದ್ದು, ಅವರ ಮೇಲೂ ದೇಶದ್ರೋಹದ ಕೇಸು ದಾಖಲಿಸಬೇಕು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆ ನೀಡಲು ಇವರೇನು ವಕ್ತಾಕರರೇ, ಈ ರೀತಿ ಪ್ರಚೋದನಕಾರಿಯಾಗಿ ಮಾತನಾಡುವವರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕಲ್ಲವೇ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…