ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ವಿವಾದಕ್ಕೆ ಕಾರಣವಾದ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ

ರಾಜ್ಯದ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಗ್ರಾಪಂ ಸದಸ್ಯ ಆಗಿರುವ ಹರೀಶ್ ಇಂಜಾಡಿ ಅವರು ಈ ಹಿಂದೆ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು ಎಂದು ಹೇಳಲಾಗಿದೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ.

ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಾಜಿ ರೌಡಿ ಶೀಟರ್ ಆಯ್ಕೆ ಮಾಡಿರುವ ಕುರಿತು ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ, ಪೊಲೀಸ್ ವೆರಿಫಿಕೇಶನ್ ನಡೆದ ಬಳಿಕವೇ ಈ ಆಯ್ಕೆ ಕಾನೂನು ಪ್ರಕಾರವಾಗಿ ನಡೆದಿದೆ. 2008ರ ಬಳಿಕ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಅಲ್ಲದೆ ರೌಡಿ ಶೀಟ್‌ನಿಂದ ಅವರ ಹೆಸರು ತೆಗೆಯಲಾಗಿದೆ ಎಂದು ಹರೀಶ್ ಪರ ಸಮರ್ಥನೆ ಮಾಡಿದ್ದಾರೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!