ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದು ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಈ ಹಿಂದೆಯೇ ಶಾಸಕರಿಗೆ ಹಲವಾರು ಮನವಿಗಳು ಬಂದಿದ್ದವು. ಯುವಕರು, ಯುವ ಸಂಘಟನೆಗಳಿಂದ ಶಾಸಕರಿಗೆ ಮನವಿ ಬಂದಿದ್ದು ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಕಳೆದ ಕೆಲವು ತಿಂಗಳ ಹಿಂದೆ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರ ಜೊತೆ ಮಾತುಕತೆ ನಡೆಸಿದ ವೇಳೆ ಸಚಿವರು ಅಸ್ತು ಎಂದಿದ್ದರು. ಕ್ರೀಡಾ ಇಲಾಖೆಯ ಮೂಲಕ ಜಿಮ್ ಕೇಂದ್ರ ತೆರೆಯಲು ಅವಕಾಶವಿರುವ ಬಗ್ಗೆ ಶಾಸಕರು ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಶಾಸಕರು ಮೂರು ಜಿಮ್ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಪ್ರಸ್ತಾವನೆ ಸಚಿವಾಲಯದಿಂದ ಕಮಿಷನರ್ ಅವರಿಗೆ ಬಂದಿದ್ದು ಈ ಬಗ್ಗೆ ಶಾಸಕರು ಕಮಿಷನರ್ ಜೊತೆ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…