ಇಂದು ಬೆಳಿಗ್ಗೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ಹೊಲದಲ್ಲಿ ಡ್ರೋನ್ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿದ್ದಾರೆ. ಇಂದು ಬೆಳಿಗ್ಗೆ 9.45 ರ ಸುಮಾರಿಗೆ ಅನುಪ್ಗಢ ಪ್ರದೇಶದ ಗ್ರಾಮಸ್ಥರು ಮಾನವರಹಿತ ವೈಮಾನಿಕ ಡ್ರೋನ್ ಪತ್ತೆ ಹಚ್ಚಿದರು.
ಅವರು ಅದನ್ನು ಗಮನಿಸಿದ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅನುಪ್ಗಢ ಸ್ಟೇಷನ್ ಹೌಸ್ ಆಫೀಸರ್ ಈಶ್ವರ್ ಜಂಗಿದ್ ಅವರು ತಕ್ಷಣ ಗಡಿ ಭದ್ರತಾ ಪಡೆಗೆ ಮಾಹಿತಿ ನೀಡಿ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಬಿಎಸ್ಎಫ್ ವಶಕ್ಕೆ ಪಡೆದಿರುವ ಡ್ರೋನ್ 5 ರಿಂದ 7 ಅಡಿ ಉದ್ದವಿದ್ದು ಬಹುತೇಕ ಹಾನಿಗೊಳಗಾಗಿದೆ. ಅದರ ಕ್ಯಾಮೆರಾ ಮಾಡ್ಯೂಲ್ ಮುರಿದಿದೆ.
“ನಾವು ಡ್ರೋನ್ ಅನ್ನು ವಶಪಡಿಸಿಕೊಂಡಿದ್ದೇವೆ. ಆ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ” ಎಂದು ಪೊಲೀಸರು ಹೇಳಿದರು. ಡ್ರೋನ್ ಅನ್ನು ಅದರ ಮೂಲ ಮತ್ತು ಉದ್ದೇಶವನ್ನು ನಿರ್ಧರಿಸಲು ವಿಧಿವಿಜ್ಞಾನ ಮತ್ತು ತಾಂತ್ರಿಕ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…