ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಲಾರಿಗಳೆಡರ ನಡುವೆ ಅಪಘಾತ; ಮೈಮೇಲೆ ಬಿಸಿಬಿಸಿ ಡಂಬಾರ್ ಬಿದ್ದು ಬೆಂದು ಹೋದ ಚಾಲಕ

ಲಾರಿಗಳೆರಡು ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಜೀಪದಲ್ಲಿ ಇಂದು ಬೆಳಿಗ್ಗೆ ವೇಳೆ ನಡೆದಿದೆ.

ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಉಳಿದಂತೆ ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಕಂಚಿನಡ್ಕಪದವು ಕಡೆಯಿಂದ ಸಜೀಪನಡು ಹೋಗುತ್ತಿದ್ದ ವೇಳೆ ಕಂಚಿನಡ್ಕಪದವು ಎಂಬಲ್ಲಿ ಅಪಘಾತ ಸಂಭವಿಸಿದೆ. ಕೆಂಪು ಕಲ್ಲುಗಳನ್ನು ಸಾಗಿಸುವ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಡಾಮರು ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಎರಡು ಟಿಪ್ಪರ್ ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದಿದೆ. ಮತ್ತು ಟಿಪ್ಪರ್ ಲಾರಿಯಲ್ಲಿದ್ದ ಬಿಸಿಬಿಸಿ ಡಾಮರು ಮಿಶ್ರಿತ ಜಲ್ಲಿ ಕಲ್ಲುಗಳು ಕೆಂಪು ಕಲ್ಲು ಸಾಗಿಸುವ ಲಾರಿ ಚಾಲಕನ ಮೈ ಮೇಲೆ ಬಿದ್ದು ಬೆಂದುಹೋಗಿದೆ. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆಯಾದರೂ ಯಾವುದೇ ಪ್ರಯೋಜನವಾಗಲಿಲ್ಲ . ಬಿಸಿಯಾದ ಡಾಂಬರಿನಲ್ಲಿ ಬೆಂದು ಹೋಗಿದ್ದ ಚಾಲಕ ರಫೀಕ್ ಮೃತಪಟ್ಟಿದ್ದಾನೆ. ಜೊತೆಗೆ ಇದ್ದ ಕ್ಲೀನರ್ ಯೂಸುಫ್ ನ ಮೇಲೆಯೂ ಡಾಮರು ಬಿದ್ದಿದ್ದು ಆತನಿಗೆ ಚಿಕಿತ್ಸೆ ‌ನೀಡಲಾಗುತ್ತಿದೆ. ಡಾಮರು ಲಾರಿಯಲ್ಲಿದ್ದ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೆ ಅಪಘಾತದಲ್ಲಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!