ಜನ ಮನದ ನಾಡಿ ಮಿಡಿತ

Advertisement

ಇಸ್ಲಾಮಾಬಾದ್ : ಭಾರತ ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್

ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಸ್ವತಃ ಪಾಕ್​ ಪ್ರಧಾನಿಯೇ ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಮೇ 10 ರ ಮುಂಜಾನೆ ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಪಾಕಿಸ್ತಾನದೊಳಗಿನ ಇತರ ವಾಯು ನೆಲೆ ಹಾಗೂ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30 ಕ್ಕೆ ಕರೆ ಮಾಡಿ ಎಲ್ಲವನ್ನು ವಿವರಿಸಿದರು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ವಿಡಿಯೋವೊಂದುನ್ನು ಹಂಚಿಕೊಂಡಿದ್ದಾರೆ.

ಮೇ 9-10ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಜನರಲ್ ಆಸಿಫ್ ಮುನೀರ್ ಫೋನ್ ಮೂಲಕ ಕರೆ ಮಾಡಿ, ಭಾರತ ನಮ್ಮ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದರು. ನೂರ್ ಖಾನ್ ವಾಯುನೆಲೆ ಮತ್ತು ಕೆಲವು ಇತರ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಎಂದು ಪ್ರಧಾನಿ ಷರೀಫ್ ಸಾರ್ವಜನಿಕ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!