ಜನ ಮನದ ನಾಡಿ ಮಿಡಿತ

Advertisement

ಇಸ್ಲಾಮಾಬಾದ್ : ಭಾರತ ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್

ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಸ್ವತಃ ಪಾಕ್​ ಪ್ರಧಾನಿಯೇ ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಮೇ 10 ರ ಮುಂಜಾನೆ ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಪಾಕಿಸ್ತಾನದೊಳಗಿನ ಇತರ ವಾಯು ನೆಲೆ ಹಾಗೂ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30 ಕ್ಕೆ ಕರೆ ಮಾಡಿ ಎಲ್ಲವನ್ನು ವಿವರಿಸಿದರು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ವಿಡಿಯೋವೊಂದುನ್ನು ಹಂಚಿಕೊಂಡಿದ್ದಾರೆ.

ಮೇ 9-10ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಜನರಲ್ ಆಸಿಫ್ ಮುನೀರ್ ಫೋನ್ ಮೂಲಕ ಕರೆ ಮಾಡಿ, ಭಾರತ ನಮ್ಮ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದರು. ನೂರ್ ಖಾನ್ ವಾಯುನೆಲೆ ಮತ್ತು ಕೆಲವು ಇತರ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಎಂದು ಪ್ರಧಾನಿ ಷರೀಫ್ ಸಾರ್ವಜನಿಕ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!