ಕರಾವಳಿ

ಬೆಂಗಳೂರು : ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ವಿದ್ಯುತ್ ಕಾಮಗಾರಿ ಹಿನ್ನೆಲೆ; ರೈಲು ಸಂಚಾರ ತಾತ್ಕಾಲಿಕ ಬಂದ್

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.

ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

4 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

5 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago