ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ , ಉದ್ಯಮಿ ಪ್ರಕಾಶ್ ಕುಂಪಲ ಅವರ ನೇತೃತ್ವದಲ್ಲಿ ಉಳ್ಳಾಲ ದರ್ಗಾ ಉರೂಸ್ಗೆ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.

ಉರೂಸ್ ಕಾರ್ಯಕ್ರಮಕ್ಕೆ ಅಗತ್ಯ ಇರುವ ಕುರಿ, ಮತ್ತು ಎರಡು ಟನ್ ಬಾಸ್ಮತಿ ಅಕ್ಕಿಯನ್ನು ಹೊರೆ ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಹೊರೆ ಕಾಣಿಕೆ ಸ್ವೀಕರಿಸಿದ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್,ಮನ್ಸೂರ್ ಮಂಚಿಲ, ದಿನೇಶ್ ರೈ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಾಂಗ್ರೆಸ್ ಮುಖಂಡರಾದ ಹಲವರು ಭಾಗಿಯಾಗಿದ್ರು.



