ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ ಹಿಂದೆ ಗಲಾಟೆಗಳು ನಡೆದಿದೆ.

ಅದರ ಮುಂದುವರಿದ ಭಾಗ ಕೊಲೆಯತ್ನ ನಡೆದಿದೆಯಾ? ಎಂಬ ಸಂಶಯ ಪೋಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೋಲೀಸ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಮೀದ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ನಿಂತುಕೊಂಡಿದ್ದ ಹಮೀದ್ ಅವರನ್ನು ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ.



